Home » ಲೈವ್ ನ್ಯೂಸ್ » ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.05.ಜೂನ್.25:- ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳ್ಳಿಸುತ್ತಿರುವ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಲ ಯೋಜನೆ, ಶೈಕ್ಷಣಿಕ ಸಾಲ ಯೋಜನೆ, ಸ್ವಾತಂತ್ರ ಅಮೃತ ಮುನ್ನಡೆ ಯೋಜನೆಗಳಲ್ಲಿ ಸೌಲಭ್ಯಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕಾರಣ ಅರ್ಹರು ಸದರಿ ಯೋಜನೆಗಳಲ್ಲಿ ಸೌಲಭ್ಯ ಪಡೆಯಬಯಸುವ ಒಕ್ಕಲಿಗ ಸಮುದಾಯದ ಅರ್ಜಿದಾರರು ಸೇವಾಸಿಂಧು ಪೋರ್ಟಲ್ ಗ್ರಾಮಒನ್ / ಬೆಂಗಳೂರು ಒನ್ / ಕರ್ನಾಟಕ ಒನ್ ದಲ್ಲಿ ಅನ್‌ಲೈನ್‌ನಲ್ಲಿ ಹಾಗೂ ಸ್ವಾತಂತ್ರö್ಯ ಅಮೃತ ಮುನ್ನಡೆ ಯೋಜನೆಗೆ ಅರ್ಜಿಯನ್ನು ಕೌಶಲ್ಯ ಕರ್ನಾಟಕ ಅಭಿವೃದ್ಧಿ ನಿಗಮದ ತಂತ್ರಾಶದ  https://www.kaushalkar.com  ನಲ್ಲಿ ಅರ್ಜಿಯನ್ನು ದಿನಾಂಕ: 02-07-2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದ ಜಾಲತಾಣ  https://kvcdc.karnataka.gov.in   ಅಥವಾ ನಿಗಮದ ದೂರವಾಣಿ ಸಂಖ್ಯೆ: 080-29904350, 29904268 ಅನ್ನು ಸಂಪರ್ಕಿಸುವುದು ಅಥವಾ ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ನಂ. 9-8-15/5ಬಿ, ಬಿವ್ಹಿಬಿ ಕಾಲೇಜ ರಸ್ತೆ, ಮೈಲೂರ ಕ್ರಾಸ್, ಬಸವನಗರ-585403 ದೂರವಾಣಿ ಸಂ:08482-223515 ಗೆ ಸಂಪರ್ಕಿಸಬಹುದಾಗಿದೆAದು ಅವರು ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology