ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ: ಹೆಸರು ಬೆಳೆಗೆ ನೋಂದಾಯಿಸಲು ಜುಲೈ 15 ಕೊನೆ ದಿನ
ಕೊಪ್ಪಳ13ಜುಲೈ 26: 2026-27 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ – ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯನ್ನು ಕೊಪ್ಪಳ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಯೋಜನೆಯಡಿ ಹೆಸರು (ಮಳೆ ಆಶ್ರಿತ) ಬೆಳೆಗೆ ನೋಂದಾಯಿಸಲು ಜುಲೈ 15 ಕೊನೆಯ ದಿನವಾಗಿದೆ. ನಿಗದಿತ ದಿನಾಂಕದೊಳಗಾಗಿ ಬೆಳೆವಿಮೆ ನೋಂದಾಯಿಸಿ ಯೋಜನೆಯ ಪ್ರಯೋಜನ ಪಡೆಯುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Any questions related to prajaprabhat?